ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು: ಅಣ್ಣಪ್ಪ ಓಲೇಕಾರ್
Author : Vinayak M Bhat
ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ ಅವರು ಅಧಿವೇಶನದಲ್ಲಿ ತೆಗೆದುಕೊಂಡ ನಿರ್ಧಾರ ನ್ಯಾಯವಾದಗಳಲ್ಲಿ ಆತ್ಮ ಸ್ಥೈರ್ಯ ಬಂದಿದೆ. ಕರ್ನಾಟಕ ರಾಜ್ಯದಲ್ಲಿ ವಕೀಲರ ಮೇಲೆ ಹಲ್ಲೆ, ಕೊಲೆ, ದೌರ್ಜನ್ಯಗಳು ಪದೇ ಪದೇ ನಡೆಯುತ್ತಿವೆ. ವಕೀಲರೂ ಸಹ ಸಮಾಜದ ಒಂದು ಅವಿಭಾಜ್ಯ ಅಂಗವಾಗಿರುತ್ತಾರೆ. ನಮ್ಮ ರಾಜ್ಯದಲ್ಲಿ 1 ಲಕ್ಷಕ್ಕೂ ಹೆಚ್ಚು ವಕೀಲರಿದ್ದಾರೆ. ಇಲ್ಲಿಯವರೆಗೂ ಈ ಕುರಿತು ರಕ್ಷಣಾ ಕಾಯ್ದೆ ಜಾರಿಗೆ ತರಬೇಕು ಎಂದು ಅನೇಕ ಬಾರಿ ಮನವಿ ನೀಡಿದರೂ ಹೋರಾಟಗಳನ್ನು ಮಾಡಿದರೂ ಯಾವ ಪ್ರಯೋಜನ ಆಗಿದ್ದಿಲ್ಲ. ಈ ಕುರಿತು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಘನ ಸರ್ಕಾರವು ವಕೀಲರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಹಲ್ಲೆ ಮಾಡಿದವರಿಗೆ 3 ವರ್ಷ ಶಿಕ್ಷೆ ಮತ್ತು 1 ಲಕ್ಷ ರೂ.ದಂಡ ವಿಧಿಸಲು ಈ ನಿಯಮ ಜಾರಿಗೆ ತಂದಿದ್ದಕ್ಕಾಗಿ ಕಲಘಟಗಿ ತಾಲೂಕಾ ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಅಣ್ಣಪ್ಪ ಓಲೇಕಾರ್ ಧನ್ಯವಾದ ಅರ್ಪಿಸಿದ್ದಾರೆ.













